ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ: ಕಾಜಿರಂಗ ರಾಷ್ಟ್ರೀಯ ಉದ್ಯಾನ ಜಲಾವೃತ

Last Updated 10 ಜುಲೈ 2017, 14:44 IST
ಅಕ್ಷರ ಗಾತ್ರ

ಇಟಾನಗರ, ಇಂಫಾಲ: ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಹಾಗೂ ಭೂ ಕುಸಿತ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಜನರು ನೆಲೆ ಇಲ್ಲದೆ ಪರದಾಡುವಂತಾಗಿದೆ.

ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆಗಳು ಮುಳುಗಡೆಯಾಗಿವೆ, ಹಲವು ಪ್ರದೇಶಗಳು ನೀರಿನಿಂದಾವೃತವಾಗಿ ನಡುಗಡ್ಡೆಯಂತಾಗಿದ್ದು, ಸಂಪರ್ಕ ಕಡಿದುಕೊಂಡಿವೆ.

ರಾಷ್ಟ್ರೀಯ ಹೆದ್ದಾರಿ– 415ರಲ್ಲಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಸಂಪರ್ಕ ಕಡಿತಗೊಂಡಿದೆ. ನಿನ್ನೆ ಸಂಜೆ ಇಟಾನಗರದ ಸಮೀಪ ಮೂರು ವರ್ಷದ ಮಗುವೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ.

ಇಫಾಲ–ಜೈರಿ ಮಧ್ಯೆ ಎನ್‌ಎಚ್‌–37 ಭೂಕುಸಿತದಿಂದ 200 ಮೀಟರ್‌ನಷ್ಟು ಹಾನಿಯಾಗಿದೆ. ನಾಗಲ್ಯಾಂಡ್‌ನ ಕೊಹಿಮಾ–ದಿಮ್‌ಪುರ ಮಧ್ಯೆ ರಸ್ತೆ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT