ರಾಜ್ಯದ ಅಧಿಕಾರ ಮೊಟಕು ಮಾಡುವ ಯಾವುದೇ ಉದ್ದೇಶ ಕೇಂದ್ರಕ್ಕೆ ಇಲ್ಲ’ ಎಂದು ಅವರು ಮಾಧ್ಯಮ ಗೋಷ್ಠಿಯಲ್ಲಿ ಸೋಮವಾರ ಪ್ರತಿಪಾದಿಸಿದರು.
‘ಸಿದ್ದರಾಮಯ್ಯ ಅವರ ಅಣತಿಯಂತೆ ಕಾಂತರಾಜ ಹೇಳಿಕೆ ನೀಡುತ್ತಿದ್ದಾರೆ. ನಾನು ಹಿಂದುಳಿದ ವರ್ಗಗಳ ಪರ ಎಂದು ಘೋಷಿಸುವ ಮುಖ್ಯಮಂತ್ರಿ ಈ ವಿಷಯದಲ್ಲಿ ಅಡ್ಡಗಾಲು ಹಾಕುತ್ತಿದ್ದಾರೆ. ಈ ಮಸೂದೆಗೆ ಒಪ್ಪಿಗೆ ಸೂಚಿಸುವಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ರಾಜ್ಯಸಭಾ ಸದಸ್ಯರಿಗೂ ಮುಖ್ಯಮಂತ್ರಿ ಕೂಡಲೇ ಪತ್ರ ಬರೆಯಬೇಕು’ ಎಂದು ಆಗ್ರಹಿಸಿದರು.