ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೂದೆಗೆ ಬೆಂಬಲ ನೀಡದಿದ್ದರೆ ಹೋರಾಟ: ಬಿಜೆಪಿ ಎಚ್ಚರಿಕೆ

Last Updated 10 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶದಿಂದ  ಕೇಂದ್ರ ಸರ್ಕಾರ ರೂಪಿಸಿರುವ ತಿದ್ದುಪಡಿ ಮಸೂದೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಬಲ ನೀಡದೇ ಇದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಎಚ್ಚರಿಸಿದರು.

‘ಹಿಂದುಳಿದವರಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯ ಕಲ್ಪಿಸುವ ಉದ್ದೇಶಕ್ಕೆ ತರುತ್ತಿರುವ ಮಸೂದೆ ಬಗ್ಗೆ  ಹಿಂದುಳಿದ ವರ್ಗಗಳ ರಾಜ್ಯ ಆಯೋಗದ ಅಧ್ಯಕ್ಷ ಕಾಂತರಾಜ ಅವರು ಅನಗತ್ಯ ಟೀಕೆ ಮಾಡುತ್ತಿದ್ದಾರೆ.

ರಾಜ್ಯದ ಅಧಿಕಾರ ಮೊಟಕು ಮಾಡುವ ಯಾವುದೇ ಉದ್ದೇಶ ಕೇಂದ್ರಕ್ಕೆ ಇಲ್ಲ’ ಎಂದು ಅವರು ಮಾಧ್ಯಮ ಗೋಷ್ಠಿಯಲ್ಲಿ ಸೋಮವಾರ  ಪ್ರತಿಪಾದಿಸಿದರು.
‘ಸಿದ್ದರಾಮಯ್ಯ ಅವರ ಅಣತಿಯಂತೆ ಕಾಂತರಾಜ ಹೇಳಿಕೆ ನೀಡುತ್ತಿದ್ದಾರೆ. ನಾನು ಹಿಂದುಳಿದ ವರ್ಗಗಳ ಪರ ಎಂದು ಘೋಷಿಸುವ ಮುಖ್ಯಮಂತ್ರಿ ಈ ವಿಷಯದಲ್ಲಿ ಅಡ್ಡಗಾಲು ಹಾಕುತ್ತಿದ್ದಾರೆ.  ಈ ಮಸೂದೆಗೆ ಒಪ್ಪಿಗೆ ಸೂಚಿಸುವಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ರಾಜ್ಯಸಭಾ ಸದಸ್ಯರಿಗೂ ಮುಖ್ಯಮಂತ್ರಿ ಕೂಡಲೇ ಪತ್ರ ಬರೆಯಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರದ ಅಧಿಕಾರ ಕಿತ್ತುಕೊಳ್ಳುವ ಒಂದೇ ಒಂದು ಶಬ್ದ ಮಸೂದೆಯಲ್ಲಿ ಇಲ್ಲ. ಜನರನ್ನು ದಿಕ್ಕು ತಪ್ಪಿಸಲು ಕಾಂಗ್ರೆಸ್‌ ಸರ್ಕಾರ ಸುಳ್ಳು ಹೇಳುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT