ಪಾಲಿಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘಟನೆಗಳ ಪ್ರತಿನಿಧಿಗಳು, ‘ಎರಡು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿದೆ. ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ಶೆಡ್ಗಳು ಸುರಕ್ಷಿತವಾಗಿಲ್ಲ. ಮಳೆ, ಗಾಳಿ, ಬಿಸಿಲಿನಲ್ಲೇ ವ್ಯಾಪಾರ ನಡೆಸಬೇಕಾಗಿದೆ. ಕಾಮಗಾರಿ ಚುರುಕುಗೊಳಿಸಲು ಪಾಲಿಕೆಗೆ ಸೂಚನೆ ಕೊಡಬೇಕು’ ಸಚಿವರಿಗೆ ಮನವಿ ಮಾಡಿದರು.