ನ್ಯಾಯಮೂರ್ತಿ ಎಫ್.ಆರ್. ರೆಯಿಸ್ ಮತ್ತು ನೂತನ್ ಸರ್ದೇಸಾಯಿ ಅವರನ್ನು ಒಳಗೊಂಡ ಪೀಠವು ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ವಿಮಾನ ನಿಲ್ದಾಣದ ನಿರ್ದೇಶಕ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉಪ ಕಮಾಂಡಂಟ್ ಅವರಿಗೆ ನೋಟಿಸ್ ನೀಡಿದೆ. ಮೂರು ವಾರಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಲಾಗಿದೆ.
ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕ ಸಭೆ ನಡೆಸಿರುವುದು ಕಾನೂನು ಬಾಹಿರ, ಇಂತಹ ಸಭೆ ನಡೆಸಲು ಅವಕಾಶ ಮಾಡಿಕೊಡುವ ಮೂಲಕ ಪ್ರತಿವಾದಿಗಳು ಕಾನೂನಿಗೆ ವಿರುದ್ಧವಾಗಿ ನಡೆದು ಕೊಂಡಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.