‘ದಕ್ಷಿಣ ಕನ್ನಡದಲ್ಲಿ ಕೋಮು ಗಲಭೆ ಹೆಚ್ಚಾಗಲು ಬಿಜೆಪಿ ಕಾರಣ ಎಂದು ಅಲ್ಲಿನ ಮುಖಂಡರೇ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್, ಬಜರಂದಳ, ಶ್ರೀರಾಮಸೇನೆಯನ್ನು ನಿಷೇಧಿಸಬೇಕು ಎಂಬ ಒತ್ತಾಯವೂ ಕೇಳಿಬಂದಿವೆ. ಇದನ್ನು ಕಾಂಗ್ರೆಸ್ ಹೇಳುತ್ತಿಲ್ಲ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದು, ಗಲಭೆ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದರು.