ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಗರು ಚಿತ್ರತಂಡದಿಂದ ಪೊಲೀಸರ ನಿಧಿಗೆ ₹ 1 ಲಕ್ಷ ದೇಣಿಗೆ

Last Updated 11 ಜುಲೈ 2017, 5:46 IST
ಅಕ್ಷರ ಗಾತ್ರ

ಬೆಂಗಳೂರು: ಪಾರ್ವತಮ್ಮ ರಾಜ್‌ಕುಮಾರ್‌ ಅವರ ನಿಧನದ ಹಿನ್ನೆಲೆಯಲ್ಲಿ ಶಿವರಾಜ್‌ಕುಮಾರ್ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸದಿರಲು ನಿರ್ಧರಿಸಿದ್ದಾರೆ.

 ಈ ಹಿನ್ನೆಲೆಯಲ್ಲಿ ಟಗರು ಚಿತ್ರ ತಂಡ ಒಂದು ಲಕ್ಷ ರೂಪಾಯಿಗಳನ್ನು ಪೊಲೀಸರ ಕಲ್ಯಾಣ ನಿಧಿಗೆ  ದೇಣಿಗೆ ನೀಡಿದೆ.  ಟಗರು ಚಿತ್ರದಲ್ಲಿ ಶಿವರಾಜ್‌ ಕುಮಾರ್‌ ಅಭಿನಯಿಸುತ್ತಿದ್ದಾರೆ.  ಈ  ಚಿತ್ರ ಪೊಲೀಸರಿಗೆ ಸಂಬಂಧಿಸಿದ ಕಥಾವಸ್ತು ಹೊಂದಿದೆ.

ಒಂದು ಲಕ್ಷ ರೂಪಾಯಿ  ಚಕ್ ಅನ್ನು ಶಿವರಾಜ್‌ ಕುಮಾರ್‌  ಎ ಡಿ ಜಿ ಪಿ ಭಾಸ್ಕರ್ ರಾವ್ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ  ನಿರ್ದೇಶಕ ಸೂರಿ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT