ಬೆಂಗಳೂರು: ಪಾರ್ವತಮ್ಮ ರಾಜ್ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಶಿವರಾಜ್ಕುಮಾರ್ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸದಿರಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಟಗರು ಚಿತ್ರ ತಂಡ ಒಂದು ಲಕ್ಷ ರೂಪಾಯಿಗಳನ್ನು ಪೊಲೀಸರ ಕಲ್ಯಾಣ ನಿಧಿಗೆ ದೇಣಿಗೆ ನೀಡಿದೆ. ಟಗರು ಚಿತ್ರದಲ್ಲಿ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಚಿತ್ರ ಪೊಲೀಸರಿಗೆ ಸಂಬಂಧಿಸಿದ ಕಥಾವಸ್ತು ಹೊಂದಿದೆ.
ಒಂದು ಲಕ್ಷ ರೂಪಾಯಿ ಚಕ್ ಅನ್ನು ಶಿವರಾಜ್ ಕುಮಾರ್ ಎ ಡಿ ಜಿ ಪಿ ಭಾಸ್ಕರ್ ರಾವ್ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ನಿರ್ದೇಶಕ ಸೂರಿ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಇದ್ದರು.