ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಒಟ್ಟು ಹತ್ತು ಮಂದಿ ಪೈಕಿ ಐವರನ್ನು ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸೋಮವಾರ ಸಂದರ್ಶನಕ್ಕೆ ಒಳಪಡಿಸಿತ್ತು. ಈ ಪೈಕಿ, ರವಿಶಾಸ್ತ್ರಿ ನಂತರ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಟಾಮ್ ಮೂಡಿ ಹೆಸರು ಮುಂಚೂಣಿಯಲ್ಲಿದ್ದವು. ಮಾಜಿ ಕ್ರಿಕೆಟಿಗರಾದ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಹಾಗೂ ವಿ.ವಿ.ಎಸ್. ಲಕ್ಷ್ಮಣ್ ಅವರನ್ನೊಳಗೊಂಡ ಸಿಎಸಿ ಸಂದರ್ಶನ ನಡೆಸಿತ್ತು. ನಂತರ ಆಯ್ಕೆ ನಿರ್ಧಾರವನ್ನು ತಡೆಹಿಡಿಯಲಾಗಿತ್ತು.