ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರದ ಆಡಳಿತ ಸಹಿಸಲು ಆಗುತ್ತಿಲ್ಲ. ಅವರಿಗೆ ಅತ್ಯಂತ ಬೇಗ ಚುನಾವಣೆ ಆಗಬೇಕಾಗಿದೆ. ಹೀಗಾಗಿ, ಏನಾದರೊಂದು ಮಾಡುತ್ತಿರುತ್ತಾರೆ. ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸ್ಥಿತಿ ಬಂದಾಗ ಶಾಂತಿ ಸ್ಥಾಪಿಸಲು ಎಲ್ಲ ರಾಜಕೀಯ ಪಕ್ಷಗಳು ಕೆಲಸ ಮಾಡಬೇಕು. ಅದರೆ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿ ಕದಡುತ್ತಿದ್ದಾರೆ’ ಎಂದು ಆರೋಪಿಸಿದರು.