ಸಿಂಗರೇಣಿ ಈ ವರ್ಷ ರಾಯಚೂರು ಶಾಖೋತ್ಪನ್ನ ಕೇಂದ್ರಕ್ಕೆ 30 ಲಕ್ಷ ಟನ್, ಯರಮರಸ್ ಶಾಖೋತ್ಪನ್ನ ಕೇಂದ್ರಕ್ಕೆ 20 ಲಕ್ಷ ಟನ್ ಮತ್ತು 31 ಲಕ್ಷ ಟನ್ ಕಲ್ಲಿದ್ದಲ್ಲನ್ನು ಬಳ್ಳಾರಿ ಶಾಖೋತ್ಪನ್ನ ಕೇಂದ್ರಕ್ಕೆ ಸರಬರಾಜು ಮಾಡಲಿದೆ ಎಂದು ಕೆಪಿಸಿಎಲ್ ತಿಳಿಸಿದೆ. ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್ ನಾಯ್ಕ್ ಮತ್ತು ಸಿಂಗರೇಣಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರ ಸಮ್ಮುಖದಲ್ಲಿ ಅಧಿಕಾರಿಗಳು ಒಪ್ಪಂದ ಪತ್ರಕ್ಕೆ ಸಹಿ ಮಾಡಿದರು.