‘ಕಾನೂನು ಮತ್ತು ಸುವ್ಯವಸ್ಥೆ ರಾಜ್ಯ ಸರ್ಕಾರದ ವ್ಯಾಪ್ತಿಯ ವಿಷಯ. ಆದರೆ, ಇಲ್ಲಿ ಸರ್ಕಾರದ ಭಾಗವಾಗಿರುವ ಸಚಿವರೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ. ಕೆಲವು ಪ್ರದೇಶಗಳಲ್ಲಿ ಮಾತ್ರ ಹಿಂಸೆಯ ಘಟನೆಗಳು ನಡೆದಿವೆ. ಆದರೆ, ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪರಿಸ್ಥಿತಿಯ ದುರ್ಲಾಭ ಪಡೆಯಲು ಸಚಿವರಿಬ್ಬರು ಯತ್ನಿಸುತ್ತಿದ್ದಾರೆ. ಘರ್ಷಣೆ ನಡೆಯದ ಪ್ರದೇಶಗಳಲ್ಲಿ ನಿಷೇಧಾಜ್ಞೆಯನ್ನು ಅಂತ್ಯಗೊಳಿಸುವ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.