ಕಲಬುರ್ಗಿ:‘ಬಿಜೆಪಿ ನಾಯಕರು ಷಂಡರೊ, ಗಂಡಸರೊ ಗೊತ್ತಿಲ್ಲ. ನಾನು ಅಂಥ ಭಾಷೆ ಬಳಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ನಾವೇನು ಷಂಡರಾ ಎಂದು ಬಿಜೆಪಿಯುವರೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ. ಷಂಡತನದ ಬಗ್ಗೆ ಅವರೇ ಉತ್ತರ ನೀಡಬೇಕು’ ಎಂದು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.