ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಕಟ್ಟಿಯೇ ಸಿದ್ಧ: ಕೇಂದ್ರ ಸಚಿವ

Last Updated 11 ಜುಲೈ 2017, 19:30 IST
ಅಕ್ಷರ ಗಾತ್ರ

ಕೋಲ್ಕತ್ತ: ‘ರಾಮ ಮಂದಿರ ನಿರ್ಮಾಣವು ಭಾರತದ ಕೋಟ್ಯಂತರ ‘ರಾಮ ಭಕ್ತರ’ ಭಾವನೆಗಳಿಗೆ ಸಂಬಂಧಿಸಿದ ವಿಚಾರ. ನ್ಯಾಯಾಲಯದ ಆದೇಶದ ಅನುಸಾರ ಅಥವಾ ಒಮ್ಮತ ಪಡೆಯುವ ಮೂಲಕ ರಾಮ ಮಂದಿರ ನಿರ್ಮಿಸುವುದು ಖಚಿತ’ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಹೇಳಿದರು. ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡ ಅವರು, ‘ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ನಿಲುವು ಸ್ಪಷ್ಟವಾಗಿದೆ’ ಎಂದರು.

ಹಿಂದುಳಿದ ಪಶ್ಚಿಮ ಬಂಗಾಳ: ಇದೇ ವೇಳೆ, ಉತ್ತರ 24 ಪರಗಣ ಜಿಲ್ಲೆಯ ಬಸೀರ್‌ಹಾಟ್ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗೆ ಸಂಬಂಧಿಸಿ  ಪಶ್ಚಿಮ ಬಂಗಾಳ ಸರ್ಕಾರವನ್ನು ಅವರು ಟೀಕಿಸಿದರು.

‘ಪಶ್ಚಿಮ ಬಂಗಾಳವು ಮಹಾನ್ ಚಿಂತಕರು ಹುಟ್ಟಿದ ಜಾಗ. . ದೇಶದ ಮುಂಚೂಣಿ ರಾಜ್ಯವಾಗಬೇಕಿದ್ದ ಪಶ್ಚಿಮ ಬಂಗಾಳವು, ಸ್ವಾತಂತ್ರ್ಯ ಸಿಕ್ಕ ಎಪ್ಪತ್ತು ವರ್ಷಗಳ ನಂತರವೂ ಬೇರೆ ರಾಜ್ಯಗಳಿಗಿಂತ ಹಿಂದುಳಿದಿರುವುದು ದುರದೃಷ್ಟಕರ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT