ಕೋಲ್ಕತ್ತ: ‘ರಾಮ ಮಂದಿರ ನಿರ್ಮಾಣವು ಭಾರತದ ಕೋಟ್ಯಂತರ ‘ರಾಮ ಭಕ್ತರ’ ಭಾವನೆಗಳಿಗೆ ಸಂಬಂಧಿಸಿದ ವಿಚಾರ. ನ್ಯಾಯಾಲಯದ ಆದೇಶದ ಅನುಸಾರ ಅಥವಾ ಒಮ್ಮತ ಪಡೆಯುವ ಮೂಲಕ ರಾಮ ಮಂದಿರ ನಿರ್ಮಿಸುವುದು ಖಚಿತ’ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಹೇಳಿದರು. ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡ ಅವರು, ‘ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ನಿಲುವು ಸ್ಪಷ್ಟವಾಗಿದೆ’ ಎಂದರು.