ಅಂಚೆ ಇಲಾಖೆಯ ಈ ಕಚೇರಿ ವ್ಯಾಪ್ತಿಗೆ ಲೊಕ್ಕನಹಳ್ಳಿ, ಕೌಳ್ಳಿಹಳ್ಳ ಡ್ಯಾಂ, ಬೋರೇದೊಡ್ಡಿ, ಜಡೇಸ್ವಾಮಿದೊಡ್ಡಿ, ಸೇಬಿನಕೂಬೆ ಗ್ರಾಮಗಳು ಬರುತ್ತವೆ.
ಪ್ರತಿಭಟನೆ: ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ. ಇಲಾಖೆ ನೌಕರನ ಕೃತ್ಯದಿಂದಾಗಿ ನಾಗರಿಕರಿಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ಸಮಗ್ರ ಮಾಹಿತಿ ಪಡೆದು, ಕರ್ತವ್ಯಲೋಪ ಎಸಗಿದ ನೌಕರನನ್ನು ಪತ್ತೆ ಹಚ್ಚಿ, ಕ್ರಮ ಜರುಗಿಸಲಾಗುವುದು ಎಂದು ನಂಜನಗೂಡು ಅಂಚೆ ಇಲಾಖೆ ಅಧೀಕ್ಷಕ ಶ್ರೀನಿವಾಸ್ ಪ್ರತಿಕ್ರಿಯಿಸಿದರು.