‘ಇಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ರಸ್ತೆಯನ್ನು ದಾಟಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಈ ಭಾಗದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಹೀಗಾಗಿ ಸುರಂಗ ಮಾರ್ಗ ಅಥವಾ ಸ್ಕೈವಾಕ್ ನಿರ್ಮಿಸಬೇಕು’ ಎಂದು ಪಡೆಯ ಅಧ್ಯಕ್ಷ ನಾಗರಾಜ್ ಒತ್ತಾಯಿಸಿದರು. ಮೆಟ್ರೊ ನಿಲ್ದಾಣದ ಅಧಿಕಾರಿಗೆ ಮನವಿ ಸಲ್ಲಿಸಿದರು.