‘ರಾಜ್ಯವನ್ನು ಪ್ರತಿನಿಧಿಸುವ ಎಂಟು ಲೋಕಸಭಾ ಸದಸ್ಯರು ಹಾಗೂ ಒಬ್ಬರು ರಾಜ್ಯಸಭಾ ಸದಸ್ಯರು ಮಾತ್ರ ಗ್ರಾಮವನ್ನು ಆಯ್ಕೆ ಮಾಡಿ, ಮಾಹಿತಿಯನ್ನು ಅಪ್ ಲೋಡ್ ಮಾಡಿದ್ದಾರೆ’ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
‘ಎಲ್ಲ ಸಂಸದರು ಹಾಗೂ ಆಯಾ ಜಿಲ್ಲಾಧಿಕಾರಿಗಳ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ. ಕೆಲವರು ಆಯ್ಕೆ ಮಾಡಿಲ್ಲ ಎಂದು ತಿಳಿಸಿದರೆ, ಇನ್ನೂ ಕೆಲವರು ತಾಂತ್ರಿಕ ತೊಂದರೆ ಇದೆ ಎಂದು ಹೇಳುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.
ಮೂರನೇ ಹಂತಕ್ಕೆ ಆಯ್ಕೆ ಮಾಡಿದ ಸಚಿವೆ ನಿರ್ಮಲಾ:
ಕರ್ನಾಟಕವನ್ನು ಪ್ರತಿನಿಧಿಸುವ ವಾಣಿಜ್ಯ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಹಂತದ ಆದರ್ಶ ಗ್ರಾಮ ಯೋಜನೆಗೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿದ್ದಾರೆ.