‘ಕಂಪೆನಿ ಪ್ರತಿನಿಧಿಗಳು ಆಕಾಶಮಾರ್ಗದಲ್ಲಿ ಶರವೇಗದ ಟ್ಯಾಕ್ಸಿ ಸೇವೆ ಒದಗಿಸುವ ಪಾಡ್ ಕಾರ್ ಮಾದರಿಯ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಯೋಜನೆ ಅನುಷ್ಠಾನಕ್ಕೆ ಬೇಕಾಗುವ ಒಟ್ಟು ವೆಚ್ಚ ಮತ್ತು ಯೋಜನೆಯ ಕಾರ್ಯನಿರ್ವಹಣೆ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ, ಪ್ರಸ್ತಾವ ಸಲ್ಲಿಸಲು ತಿಳಿಸಿದ್ದೇವೆ. ಯೋಜನೆ ಕಾರ್ಯಸಾಧ್ಯತೆ ಬಗ್ಗೆ ಪರಿಶೀಲಿಸಿ ಮುಂದಿನ ಹೆಜ್ಜೆ ಇಡುತ್ತೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.