ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹೊಗಳುವ ಭರದಲ್ಲಿ ವಿಡಿಯೊವೊಂದನ್ನು ಟ್ವೀಟ್ ಮಾಡುವ ಮೂಲಕ ಸದ್ಗುರು ಜಗ್ಗಿ ವಾಸುದೇವ್ ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.
ಆನೆಯೊಂದು ಕಸವನ್ನು ಕಸದ ಬುಟ್ಟಿಗೆ ಹಾಕುವ ವಿಡಿಯೊ ಟ್ವೀಟ್ ಮಾಡಿರುವ ಈಶ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ‘ಇದು ಸ್ವಚ್ಛ ಭಾರತ ಅಭಿಯಾನದ ಫಲ’ ಎಂದು ಟ್ವೀಟ್ ಮಾಡುವ ಮೂಲಕ ನೆಟ್ಟಿಗರ ಅಪಹಾಸ್ಯಕ್ಕೆ ಒಳಗಾಗಿದ್ದಾರೆ.