ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳೇ ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಜಾಗ ಒದಗಿಸಿಕೊಟ್ಟಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದ ಹಿನ್ನೆಲೆಯಲ್ಲಿ ರಾಹುಲ್ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ಗುಪ್ತಚರ ದಳ ಎಚ್ಚರಿಕೆ ನೀಡಿದ್ದ ಹೊರತಾಗಿಯೂ ದಾಳಿ ತಡೆಯುವಲ್ಲಿ ಸರ್ಕಾರ ವಿಫಲವಾಗಿದ್ದೇಕೆ ಎಂದು ಪ್ರತಿಪಕ್ಷಗಳು ಈಗಾಗಲೇ ಸರ್ಕಾರವನ್ನು ಪ್ರಶ್ನಿಸಿವೆ.
Modi’s policies have created space for terrorists in Kashmir. Grave strategic blow for India#AmarnathTerrorAttack