ಬೀಜಿಂಗ್: ಸಿಕ್ಕಿಂ ಗಡಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ವಿಷಯಕ್ಕೆ ಸಂಬಂಧಿಸಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯ, ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ ಎಂದು ಹೇಳಿದೆ.
ಗಡಿ ವಿವಾದಕ್ಕೆ ಸಂಬಂಧಿಸಿ ಸಿಂಗಾಪುರದಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸಿದ್ದ ಜೈಶಂಕರ್ ಅವರು, ‘ಚೀನಾದೊಂದಿಗೆ ಗಡಿ ವಿವಾದವಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಇಂಥ ಪರಿಸ್ಥಿತಿ ನಿಭಾಯಿಸಲಾಗಿದೆ. ಹೀಗಾಗಿ ಈ ಬಾರಿ ನಿಭಾಯಿಸುವುದು ನಮ್ಮಿಂದಾಗದೇ’ ಎಂದು ಮರುಪ್ರಶ್ನಿಸಿದ್ದರು.
ಇದಕ್ಕೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶಾಂಗ್ ಪ್ರತಿಕ್ರಿಯೆ ನೀಡಿ, ‘ಚೀನಾದ ಭೂಪ್ರದೇಶಕ್ಕೆ ಅಕ್ರಮವಾಗಿ ನುಸುಳಿದ್ದನ್ನು ಚೀನಾ ಅನೇಕ ಬಾರಿ ಗಮನಿಸಿದೆ. ಆದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ’ ಎಂದು ಹೇಳಿದ್ದಾರೆ.