ನವದೆಹಲಿ: ಬುಧವಾರ ಮಧ್ಯಾಹ್ನ ರಾಜಧಾನಿಗೆ ಆಗಮಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಂಜೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪೂರ್ವನಿಯೋಜಿತ ವೇಳಾಪಟ್ಟಿಯಂತೆ ಅವರು ರಾಷ್ಟ್ರಪತಿಯವರನ್ನು ಭೇಟಿ ಮಾಡಿದ್ದಾರೆ. ಇದು ಸೌಜನ್ಯದ ಭೇಟಿಯಾಗಿತ್ತು. ಆದರೆ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಭೇಟಿ ಕಾರ್ಯಕ್ರಮ ನಿಗದಿಯಾಗಿಲ್ಲ ಎಂದು ರಾಜ್ಯಪಾಲರ ಕಚೇರಿ ಮೂಲಗಳು ತಿಳಿಸಿವೆ.