ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲೇ ಮೊದಲ ಬಾರಿಗೆ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದೆ. ಆಗಲೂ ಆರ್ಎಸ್ಎಸ್, ಬಜರಂಗದಳ ಸಂಘಟನೆಗಳು ಇದ್ದವು. ಆಗ ಸಣ್ಣ ಅಹಿತಕರ ಘಟನೆಗೂ ಅವಕಾಶ ಮಾಡಿಕೊಡಲಿಲ್ಲ. ಆದರೆ, ಈಗ ನಡೆಯಬಾರದ ಘಟನೆಗಳು ನಡೆಯುತ್ತಿವೆ. ಇದನ್ನೇ ಮುಂದಿಟ್ಟುಕೊಂಡು ಯಾರನ್ನೂ ದೂಷಿಸುವುದಿಲ್ಲ’ ಎಂದರು.