ಲಾಲು ಪ್ರಸಾದ್ ಅವರು ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ, ಹೋಟೆಲ್ಗಳಿಗೆ ಅಕ್ರಮವಾಗಿ ಜಮೀನು ಮಂಜೂರು ಮಾಡಿದ ಆರೋಪದ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ತೇಜಸ್ವಿ ಅವರ ಹೆಸರೂ ಇದೆ. ಹೀಗಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ತೇಜಸ್ವಿ ಆರೋಪಮುಕ್ತನಾಗಿ ಬರಲಿ’ ಎಂದು ಹೇಳಿದ್ದರು. ಈಗ ನಿತೀಶ್ ಹೇಳಿಕೆಗೆ ತೇಜಸ್ವಿ ತಿರುಗೇಟು ನೀಡಿದ್ದಾರೆ.