‘ಮಲ್ಲಿಕಾರ್ಜುನ ಖರ್ಗೆ, ಪಿ. ಚಿದಂಬರಂ, ಆನಂದ ಶರ್ಮಾ, ಗುಲಾಂ ನಬಿ ಆಜಾದ್ ಅವರು ಸೇರಿ ಎಂಟು ಜನರಿರುವ ತಂಡವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದಾರೆ. ಈ ತಂಡವು ಪಕ್ಷದ ಮಾಧ್ಯಮ ವಿಭಾಗದ ಪ್ರತಿದಿನದ ಕಾರ್ಯಚಟುವಟಿಕೆಗಳ ಮೇಲೆ ನಿಗಾ ಇರಿಸಲಿದ್ದು, ಅಗತ್ಯ ಸಲಹೆಗಳನ್ನು ನೀಡಲಿದೆ ಎಂದು ಮೂಲಗಳು ಹೇಳಿವೆ.