ರಾಜ್ಯದಲ್ಲಿ ಉಕ್ಕು ತಯಾರಿಕೆಗೆ ಅಗತ್ಯವಿರುವಷ್ಟು ಕಬ್ಬಿಣದ ಅದಿರು ಪೂರೈಕೆಯಾಗುತ್ತಿಲ್ಲ. ಸುಪ್ರೀಂಕೋರ್ಟ್ ಮೂರು ಕೋಟಿ ಮೆಟ್ರಿಕ್ ಟನ್ಗಿಂತ ಹೆಚ್ಚು ಅದಿರು ಗಣಿಗಾರಿಕೆ ಮಾಡದಂತೆ ನಿರ್ಬಂಧ ವಿಧಿಸಿದೆ. ರಾಜ್ಯದಲ್ಲಿ ಈಗ 2.6 ಕೋಟಿ ಮೆಟ್ರಿಕ್ ಟನ್ ಅದಿರು ತೆಗೆಯಲಾಗುತ್ತಿದೆ. ಜಿಂದಾಲ್ ಉಕ್ಕು ಕಾರ್ಖಾನೆಯೊಂದೇ 2.2 ಕೋಟಿ ಮೆಟ್ರಿಕ್ ಟನ್ ಅದಿರನ್ನು ಉಕ್ಕು ತಯಾರಿಕೆಗೆ ಬಳಸುತ್ತಿದೆ. ಉಳಿದದ್ದನ್ನು ಸಣ್ಣ ಪುಟ್ಟ ಘಟಕಗಳು ಬಳಸುತ್ತಿವೆ ಎಂದರು.