‘ಆರೋಪಿಯು ಪೀಣ್ಯದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅದರ ಪಕ್ಕದಲ್ಲೇ ಇರುವ ಗಾರ್ಮೆಂಟ್ಸ್ಗೆ ಸಂತ್ರಸ್ತೆ ಕೆಲಸಕ್ಕೆ ಹೋಗುತ್ತಿದ್ದರು. 2 ತಿಂಗಳಿನಿಂದ ಅವರನ್ನು ಪ್ರೀತಿ ಮಾಡುತ್ತಿದ್ದ ಕೃಷ್ಣಚಂದ್, ನಿತ್ಯ ಮನೆವರೆಗೂ ಹಿಂಬಾಲಿಸಿ ಹೋಗುತ್ತಿದ್ದ. ಆದರೆ, ಜೀವಭಯದಿಂದ ಸಂತ್ರಸ್ತೆ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ’ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.