‘ನಮ್ಮ ನಿಲುವು ಸ್ಪಷ್ಟವಾಗಿದೆ. ನಿರ್ದಿಷ್ಟ ದೇಶವೊಂದು ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಸಮಸ್ಯೆಯ ಕೇಂದ್ರ ಬಿಂದು ಎಂಬುದು ನಿಮಗೆ ತಿಳಿದಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದರಿಂದ ದೇಶ, ಪ್ರಾದೇಶಿಕ ಮತ್ತು ವಿಶ್ವ ಮಟ್ಟದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಆತಂಕ ಎದುರಾಗಿದೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಗೋಪಾಲ್ ಬಗ್ಲೇ ಚೀನಾಗೆ ತಿಳಿಸಿದ್ದಾರೆ.