‘ಪಾದಯಾತ್ರೆಯನ್ನು ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ಯಾವುದೇ ಪಕ್ಷದ ಬ್ಯಾನರ್, ಪೋಸ್ಟರ್ ಹಾಕದಂತೆ ಸೂಚನೆ ನೀಡಲಾಗಿತ್ತು. ಎಲ್ಲ ಪಕ್ಷಗಳ ನಾಯಕರು, ವಿವಿಧ ಧರ್ಮಗಳ ಗುರುಗಳು, ಬುದ್ಧಿಜೀವಿಗಳು, ಸ್ವಾತಂತ್ರ್ಯ ಹೋರಾಟಗಾರರು 3 ಕಿ.ಮೀ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ನೆಪದಲ್ಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವುದು ಬೇಸರ ಉಂಟು ಮಾಡಿದೆ. ಎರಡು ದಿನ ಕಾದು ನೋಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.