ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ವಿನಾಯ್ತಿ ನಿರ್ಧಾರಕ್ಕೆ ಸೂಚನೆ

Last Updated 13 ಜುಲೈ 2017, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಅರಕೆರೆಯ ಆರಾಧನಾ ಶಾಲೆಗೆ ಆಸ್ತಿ ತೆರಿಗೆ ವಿನಾಯ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳಬೇಕು’ ಎಂದು ಹೈಕೋರ್ಟ್‌ ಬಿಬಿಎಂಪಿಗೆ ಸೂಚಿಸಿದೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ ಪಟೇಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಶಾಲೆಗೆ ತೆರಿಗೆ ವಿನಾಯ್ತಿ ನೀಡಲು ನಿರಾಕರಿಸಿದ್ದ ಬಬಿಎಂಪಿ ಕ್ರಮಕ್ಕೆ ಬುಧವಾರಷ್ಟೇ ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿತ್ತು. ಈ ಕುರಿತು ವಿವರಣೆ ನೀಡಲು ಬಿಬಿಎಂಪಿ ಆಯುಕ್ತರು ಕೋರ್ಟ್‌ಗೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು.

ಗುರುವಾರ ವಿಚಾರಣೆಗೆ ಹಾಜರಾಗಿದ್ದ ಆಯುಕ್ತ ಮಂಜುನಾಥ್‌ ಪ್ರಸಾದ್ ಮತ್ತು ಸಹಾಯಕ ಕಂದಾಯ ಅಧಿಕಾರಿಗೆ ಈ ಕುರಿತಂತೆ ನ್ಯಾಯಪೀಠ, ‘ನಿಮ್ಮ ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದರೆ ಇಂತಹ ನಿರ್ಧಾರ ಮಾಡುತ್ತಿದ್ದಿರಾ’ ಎಂದು ಪ್ರಶ್ನಿಸಿತು. ‘ಒಂದು ವಾರದಲ್ಲಿ ಪ್ರಕರಣ  ಬಗೆಹರಿಸಿ’ ಎಂದು ನಿರ್ದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT