ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ನಿಯಮ ರೂಪಿಸಲು ನಿರ್ದೇಶನ

Last Updated 13 ಜುಲೈ 2017, 19:43 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾಹಿತಿ ಹಕ್ಕು ಕಾರ್ಯಕರ್ತರ (ಆರ್‌ಟಿಐ) ರಕ್ಷಣೆಗೆ ಸಂಬಂಧಿಸಿದಂತೆ ಸೂಕ್ತ ನಿಯಮಗಳನ್ನು ರಚಿಸಲು ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ರಾಜ್ಯ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಪಿ.ಕೆ.ಗರ್ಗ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಎಸ್‌.ಉಮಾಪತಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ನ್ಯಾಯಮೂರ್ತಿ ಜಯಂತ್ ಪಟೇಲ್ ನೇತೃತ್ವದ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲ ಡಿ.ನಾಗರಾಜ ಅವರು ಪ್ರಮಾಣ ಪತ್ರ ಸಲ್ಲಿಸಿದರು.

‘ಗೃಹ ಇಲಾಖೆ ಈ ಸಂಬಂಧ ಬುಧವಾರವಷ್ಟೇ (ಜು.12) ಸಭೆ ನಡೆಸಿದೆ. ವಿವಿಧ ಇಲಾಖೆಗಳ ಜೊತೆ ಇನ್ನಷ್ಟು ಚರ್ಚೆ ನಡೆಸಬೇಕಿದೆ. ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಕೋರಿದರು. ಇದಕ್ಕೆ ಒಪ್ಪದ ನ್ಯಾಯಪೀಠ, ‘ಆದಷ್ಟು ಶೀಘ್ರ ನೀತಿ, ನಿಯಮಾವಳಿ ರೂಪಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತ ವರದಿಯನ್ನು ನಾಲ್ಕು ವಾರಗಳಲ್ಲಿ ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT