ಕ್ರಿಕೆಟ್ ಆಡಳಿತದ ಸುಧಾರಣೆಗಾಗಿ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಆರ್.ಎಂ. ಲೋಧಾ ಸಮಿತಿಯು ನೀಡಿರುವ ಶಿಫಾರಸುಗಳ ಅನ್ವಯ 70 ವರ್ಷ ದಾಟಿದ ವ್ಯಕ್ತಿಗಳು ಬಿಸಿಸಿಐ ಮತ್ತು ರಾಜ್ಯ ಸಂಸ್ಥೆಗಳ ಪದಾಧಿಕಾರಿ ಸ್ಥಾನದಿಂದ ಅನರ್ಹರಾಗುತ್ತಾರೆ. ಅದರ ಪ್ರಕಾರ ನಿರಂಜನ್ ಶಾ ಅನರ್ಹಗೊಂಡಿದ್ದರು. ಶ್ರೀನಿವಾಸನ್ ಕೂಡ ಇದೇ ನಿಯದಡಿಯಲ್ಲಿ ಅನರ್ಹರಾಗಿದ್ದಾರೆ. ಅಲ್ಲದೇ ಅವರು 2014ರ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಶ್ರೀನಿವಾಸನ್ ಅವರು ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ಪದಚ್ಯುತಗೊಂಡಿದ್ದರು.