‘ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಎಂದು ಹೋದ ಕಡೆಗಳೆಲ್ಲ ಮುಖ್ಯಮಂತ್ರಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅವರಿಗೆ ಅಧಿಕಾರ ಮತ್ತು ಹಣದ ಮದ ಬಂದಿದೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.
‘ಉಪ ಚುನಾವಣೆಯಲ್ಲಿ ಗೆದ್ದ ಗುಂಡ್ಲುಪೇಟೆ ಮತ್ತು ಚಾಮರಾಜನಗರ ಕ್ಷೇತ್ರಗಳನ್ನೂ ಕಾಂಗ್ರೆಸ್ ಪಕ್ಷ ಉಳಿಸಿಕೊಳ್ಳಲು ಸಾಧ್ಯ ಇಲ್ಲ ಎನ್ನುವುದನ್ನು ಛಾಪಾ ಕಾಗದದಲ್ಲಿ ಬರೆದುಕೊಡುತ್ತೇನೆ’ ಎಂದರು.