‘ಪ್ರಕರಣವನ್ನು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಸರ್ಕಾರವೇ ರಚಿಸಿದ ಭ್ರಷ್ಟಚಾರ ನಿಗ್ರಹದ ದಳದಿಂದ ಈ ತನಿಖೆ ಸಾಧ್ಯ ಇಲ್ಲವೇ’ ಎಂದು ಪ್ರಶ್ನಿಸಿದ ಅವರು, ‘ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದಂತೆ ಇದನ್ನೂ ಮಾಡಬೇಡಿ. ಒಂದಂಕಿ ಲಾಟರಿ, ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳ ತನಿಖೆಯಂತೆ ಇದೂ ಹಳ್ಳ ಹಿಡಿಯಬಾರದು’ ಎಂದರು.