ನವದೆಹಲಿ: ‘ಮಕ್ಕಳ ಖಾತೆಗಳಿಗೆ ಹಣ ವರ್ಗಾವಣೆ ಮಾಡಬಾರದು’ ಎಂದು ಕರ್ನಾಟಕ ಹೈಕೋರ್ಟ್ನ ಆದೇಶ ಇದ್ದರೂ, ಅದನ್ನು ಉಲ್ಲಂಘಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕೇಂದ್ರ ಸರ್ಕಾರ ವಿಫಲವಾಗಿರುವುದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ‘ಮಲ್ಯ ಅವರನ್ನು ಹಾಜರುಪಡಿಸುವವರೆಗೂ, ಶಿಕ್ಷೆ ಪ್ರಕಟಿಸುವುದಿಲ್ಲ’ ಎಂದು ಅದು ಹೇಳಿದೆ.