ಭಾರೀ ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿದ್ದು, ರಾಜ್ಯದ ಹಲವು ಅಣೆಕಟ್ಟೆಗಳು ತುಂಬಿವೆ. ಅಣೆಕಟ್ಟೆಯ ಎಲ್ಲಾ ಗೇಟ್ಗಳನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.