ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಕುಮಾರ್‌ ಜತೆ ವೇದಿಕೆ ಹಂಚಿಕೊಳ್ಳದ ತೇಜಸ್ವಿ ಯಾದವ್

Last Updated 15 ಜುಲೈ 2017, 11:34 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಳ್ಳಬೇಕಿದ್ದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೊನೇ ಕ್ಷಣದಲ್ಲಿ ಗೈರುಹಾಜರಾಗಿದ್ದಾರೆ. ಇದು ಆಡಳಿತಾರೂಢ ಮಿತ್ರಪಕ್ಷಗಳ ನಡುವಣ ವೈಮನಸ್ಸು ಹೆಚ್ಚಾಗಿರುವುದನ್ನು ತೋರಿಸಿದೆ ಎಂದು ಮೂಲಗಳು ಹೇಳಿವೆ.

ಅಧಿಕಾರಿಗಳ ಹೇಳಿಕೆ ಪ್ರಕಾರ, ವಿಶ್ವ ಕೌಶಲ ದಿನದ ಅಂಗವಾಗಿ ಪಟ್ನಾದ ಜ್ಞಾನ ಭವನದಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಪಾಲ್ಗೊಳ್ಳಬೇಕಿತ್ತು. ಅವರ ಹೆಸರುಳ್ಳ ಫಲಕವನ್ನೂ ವೇದಿಕೆಯಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ನಾಮಫಲಕಕ್ಕೆ ಬಟ್ಟೆಯನ್ನು ಮುಚ್ಚಲಾಗಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಅದನ್ನು ತರಾತುರಿಯಲ್ಲಿ ತೆರವುಗೊಳಿಸಲಾಗಿದೆ ಎನ್ನಲಾಗಿದೆ.

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದರಿಂದ ತೇಜಸ್ವಿ ಅವರು ಉಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ನಿತೀಶ್ ಬಯಸಿದ್ದರು. ಇದಕ್ಕೆ ಆಡಳಿತಾರೂಢ ಮಿತ್ರ ಪಕ್ಷ ಆರ್‌ಜೆಡಿಯ ಶಾಸಕರು, ಸಂಸದರು ಹಾಗೂ ನಾಯಕರು ಒಕ್ಕೊರಲ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ತೇಜಸ್ವಿ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಅವರ ಮಗ ತೇಜಸ್ವಿ ಯಾದವ್ ಹಾಗೂ ಕುಟುಂದವರ ನಿವಾಸ, ಕಚೇರಿಗಳ ಮೇಲೆ ಇತ್ತೀಚೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT