ಅಧಿಕಾರಿಗಳ ಹೇಳಿಕೆ ಪ್ರಕಾರ, ವಿಶ್ವ ಕೌಶಲ ದಿನದ ಅಂಗವಾಗಿ ಪಟ್ನಾದ ಜ್ಞಾನ ಭವನದಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಪಾಲ್ಗೊಳ್ಳಬೇಕಿತ್ತು. ಅವರ ಹೆಸರುಳ್ಳ ಫಲಕವನ್ನೂ ವೇದಿಕೆಯಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ನಾಮಫಲಕಕ್ಕೆ ಬಟ್ಟೆಯನ್ನು ಮುಚ್ಚಲಾಗಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಅದನ್ನು ತರಾತುರಿಯಲ್ಲಿ ತೆರವುಗೊಳಿಸಲಾಗಿದೆ ಎನ್ನಲಾಗಿದೆ.