ಬೆಂಗಳೂರು: ‘ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಿಗೆ ವಿಶೇಷ ಆತಿಥ್ಯ ವ್ಯವಸ್ಥೆ ಮಾಡಲು ಕಾರಾಗೃಹಗಳ ಇಲಾಖೆ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್ ಅವರು ₹ 2 ಕೋಟಿ ಲಂಚ ಪಡೆದಿದ್ದಾರೆ ಎಂಬ ಮಾತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಪತ್ರ ಬರೆದಿದ್ದ ಇಲಾಖೆಯ ಡಿಐಜಿ ಡಿ. ರೂಪಾ ಅವರು ಈ ಸಂಬಂಧ ಎರಡನೇ ವರದಿಯನ್ನು ಡಿಜಿಪಿ ಅವರಿಗೆ ಶನಿವಾರ ಸಲ್ಲಿಸಿದ್ದಾರೆ.