ಹಿಂದೂ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಸ್ವಾಮೀಜಿ, ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ‘ಶರತ್ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಹಸ್ತಾಂತರಿಸಿದರೆ ಸ್ಫೋಟಕ ಮಾಹಿತಿಯೊಂದನ್ನು ನಾನು ನೀಡುತ್ತೇನೆ’ ಎಂದಿದ್ದರು.
ಶುಕ್ರವಾರ ಸಂಜೆಯೇ ಕ್ರಿಮಿನಲ್ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 160ರ ಅಡಿಯಲ್ಲಿ ವಜ್ರದೇಹಿ ಸ್ವಾಮೀಜಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶನಿವಾರ ಬೆಳಿಗ್ಗೆ ಅದನ್ನು ಸ್ವಾಮೀಜಿಗೆ ತಲುಪಿಸಲಾಗಿದೆ.