ಪ್ರಗತಿಯ ಕುರಿತು ಹರ್ಷ ವ್ಯಕ್ತಪಡಿಸಿರುವ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್., ‘ಸಾಲ ವಿತರಣೆಯಲ್ಲಿನ ವೃದ್ಧಿ ಹಾಗೂ ನಿರ್ವಹಣಾ ಲಾಭದಲ್ಲಿನ ಏರಿಕೆಯಿಂದಾಗಿ ಬ್ಯಾಂಕ್ ಪ್ರಗತಿಯಲ್ಲಿ ಮುನ್ನಡೆಯಲು ಸಾಧ್ಯವಾಗಿದೆ. ಅನುತ್ಪಾದಕ ಸಾಲ (ಎನ್ಪಿಎ) ನಿರ್ವಹಣೆ ಹಾಗೂ ಚಾಲ್ತಿ ಮತ್ತು ಉಳಿತಾಯ ಖಾತೆಯ ಠೇವಣಿ, ಡಿಜಿಟಲ್ ಬ್ಯಾಂಕಿಂಗ್, ಸಾಲ ವಿಸ್ತರಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಮುಂದಿನ 9 ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ಗುರಿ ಇದೆ’ ಎಂದರು.