ಮೈಸೂರು: ‘ವರುಣಾ ಕ್ಷೇತ್ರದಿಂದ ಪುತ್ರ ಡಾ.ಯತೀಂದ್ರ ಸ್ಪರ್ಧಿಸುವ ಕುರಿತು ಹೈಕಮಾಂಡ್ ನಿರ್ಧರಿಸಲಿದೆ’ ಎಂದು ಸಿದ್ದರಾಮಯ್ಯ ಹೇಳಿದರು.
‘ಮುಂಬರುವ ವಿಧಾನಸಭಾ ಚುನಾವಣೆಯೇ ನನಗೆ ಕೊನೆಯಾಗಲಿದೆ. ಚಾಮುಂಡೇಶ್ವರಿ ಕ್ಷೇತ್ರದ ಜನರು ಐದು ಬಾರಿ ಗೆಲ್ಲಿಸಿದ್ದಾರೆ. ರಾಜಕೀಯ ಪುನರ್ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಬಾರಿ ನಿಲ್ಲುವ ಆಲೋಚನೆಯಿದೆ. ಆದರೆ ಡಾ.ಯತೀಂದ್ರ ಸ್ಪರ್ಧಿಸುವುದು ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ’ ಎಂದರು.