ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೋವಿಂದ್ ಅವರನ್ನು ಮುಖ್ಯಮಂತ್ರಿ ಫಡಣವೀಸ್, ರಾಜ್ಯ ಬಿಜೆಪಿ ಮುಖ್ಯಸ್ಥ ರಾವ್ಸಾಹೇಬ್ ಪಾಟಿಲ್ ದಾನ್ವೆ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ವಾಗತಿಸಿದರು. ಶಿವಸೇನಾ ವತಿಯಿಂದ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಅನಂತ್ ಗೀತೆ, ಮಹಾರಾಷ್ಟ್ರ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಮತ್ತು ಹಿರಿಯ ಸಂಸದ ಚಂದ್ರಕಾಂತ್ ಖೈರೆ ಇದ್ದರು.