ಭುವನೇಶ್ವರ: ಪುರಿಯ ಬಂಕಿಮುಹನ್ ಕಡಲತೀರ ಸ್ವಚ್ಛಗೊಳಿಸುವುದು ಮತ್ತು ತೀರದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಒಡಿಶಾ ಸರ್ಕಾರ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ಅವರು ಆರಂಭಿಸಿದ್ದ ಪ್ರತಿಭಟನೆಯನ್ನು ಶನಿವಾರ ಹಿಂದಕ್ಕೆ ಪಡೆದಿದ್ದಾರೆ.