ಆಸ್ಪತ್ರೆ ನಿರ್ಮಾಣ ಕೆಲಸಕ್ಕೆ ಭಾರತೀಯರನ್ನು ನಿಯೋಜಿಸಲಾಗಿತ್ತು. ಬಳಿಕ ಅವರನ್ನು ಕೃಷಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಅಲ್ಲಿಂದ ಅವರನ್ನು ಪಶ್ಚಿಮ ಮೋಸುಲ್ನ ಬದುಶ್ ಜೈಲಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಅಲ್ಲಿಯ ಅಧಿಕಾರಿಗಳು ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.