ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಟಿ ಫಲಿತಾಂಶ ತಡೆಹಿಡಿಯಬಹುದೇ?

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಲೈಂಗಿಕ  ಕಿರುಕುಳ ಪ್ರಕರಣದಲ್ಲಿ ಕಾಲೇಜಿನಿಂದ ಉಚ್ಚಾಟಿತನಾದ ಅಂತಿಮ ವರ್ಷದ ವಿದ್ಯಾರ್ಥಿಯ ಫಲಿತಾಂಶವನ್ನು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ತಡೆ ಹಿಡಿಯಬಹುದೇ ಎನ್ನುವುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಈ ಕುರಿತು  ಕೇಂದ್ರ ಸರ್ಕಾರ ಮತ್ತು ಕಾನ್ಪುರ ಐಐಟಿಗೆ ನೋಟಿಸ್‌ ಜಾರಿ ಮಾಡಿದೆ. ವಿದ್ಯಾರ್ಥಿನಿಗೆ 2012ರಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕಾನ್ಪುರ ಐಐಟಿ ಭೌತಶಾಸ್ತ್ರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯನ್ನು 2016ರಲ್ಲಿ ಕಾಲೇಜಿನಿಂದ ಉಚ್ಚಾಟಿಸಲಾಗಿತ್ತು.

ಆತನ ಅಂತಿಮ ಸೆಮಿಸ್ಟರ್ ಫಲಿತಾಂಶ ತಡೆಹಿಡಿದಿತ್ತು. ನ್ಯಾಯ ಕೊಡಿಸುವಂತೆ ಕೋರಿ ಆತ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾನೆ. 
ವಿದ್ಯಾರ್ಥಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ ತಳ್ಳಿ ಹಾಕಿತ್ತು.

ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಆತನ ಅಂತಿಮ ಸೆಮಿಸ್ಟರ್‌ ಫಲಿತಾಂಶ ನೀಡುವಂತೆ ಆತನ ಪರ ವಕೀಲರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT