ಚಿತ್ರದಲ್ಲಿ ಇದೆ ಎನ್ನಲಾಗುತ್ತಿರುವ ಮಾನಹಾನಿ ಅಂಶಗಳ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸುವ ಸಲುವಾಗಿ, ಪತ್ರಿಕಾಗೋಷ್ಠಿ ನಿಗದಿಗೊಳಿಸಿದ್ದ ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದರು. ಇದರಿಂದಾಗಿ ಭಂಡಾರ್ಕರ್ ಪತ್ರಿಕಾಗೋಷ್ಠಿ ರದ್ದುಪಡಿಸಿದ್ದಾರೆ. ಶನಿವಾರ ಪುಣೆಯಲ್ಲಿ ಸಹ ಪ್ರಚಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಮಾಡಿದ್ದರು.