‘ಪ್ರಧಾನಿ ಮಧ್ಯಸ್ಥಿಕೆ ಮೂಲಕ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವ ಗುರುತರ ಜವಾಬ್ದಾರಿಯನ್ನು ಈ ಭಾಗದ ಸಂಸದರು, ಶಾಸಕರು ಮತ್ತು ರಾಜ್ಯದ ಮುಖ್ಯಮಂತ್ರಿಯ ಹೆಗಲಿಗೆ ವರ್ಗಾಯಿಸಿದ್ದೇವೆ. ಇದು ಅಂತಿಮ ನಿರ್ಣಯ. ಈ ನಿರ್ಣಯ ಜಾರಿಗೆ ಬರುವ ತನಕ, ಇದೇ ಧರಣಿ ವೇದಿಕೆಯಲ್ಲಿ ಇಂದಿನಿಂದಲೇ ನಿರಂತರ ಉಪವಾಸ ಸತ್ಯಾಗ್ರಹ ಪ್ರಾರಂಭಿಸುತ್ತಿದ್ದೇನೆ’ ಎಂದು ಸೊಬರದಮಠ ಪ್ರಕಟಿಸಿದರು. ಸಮಾವೇಶದಲ್ಲಿ ಭಾಗವಹಿಸಿದ್ದ ಐದು ಸಾವಿರಕ್ಕೂ ಹೆಚ್ಚು ರೈತರು ಕೈಗಳನ್ನು ಮೇಲೆತ್ತಿ ಚಪ್ಪಾಳೆ ತಟ್ಟುವ ಮೂಲಕ ನಿರ್ಣಯ ಅಂಗೀಕರಿಸಿದರು.