ದಾಬಸ್ಪೇಟೆ: ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಪಾರ್ಥೇನಿಯಂ ಗಿಡ ಬೆಳೆದಿದ್ದು, ಇದರಿಂದ ಸೊಳ್ಳೆಗಳ ಕಾಟ ವಿಪರೀತಗೊಂಡಿದೆ. ಕೂಡಲೇ ಕಳೆಯನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
‘ಡೆಂಗಿ, ಚಿಕೂನ್ ಗುನ್ಯ ಹಾಗೂ ಮಲೇರಿಯಾ ರೋಗಗಳ ಭೀತಿಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಆರೋಪಿಸಿದರು.
‘ಸೋಂಪುರ ಜಿಲ್ಲಾ ಪಂಚಾಯಿತಿ ಸದಸ್ಯರ ಮನೆಯೂ ಆವರಣದ ಸಮೀಪದಲ್ಲೇ ಇದೆ. ಅವರು ಈ ಬಗ್ಗೆ ಗಮನ ಹರಿಸಿಲ್ಲ’ ಎಂದು ಗ್ರಾಮದ ನಿವಾಸಿ ರವಿ ದೂರಿದರು.
‘ಇಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಗಿಡಗಳನ್ನು ನೆಟ್ಟಿದ್ದಾರೆ. ಆದರೆ, ಕಳೆಯಿಂದಾಗಿ ಅವು ನಾಶವಾಗಿವೆ’ ಎಂದು ಹೇಳಿದರು.